ಕಾಂಗ್ರೆಸ್ ಪಕ್ಷಕ್ಕೆ ಇದು ತೀವ್ರ ಆತ್ಮಾವಲೋಕನದ ಸಮಯ. ಲೋಕಸಭಾ ಚುನಾವಣಾ ಫಲಿತಾಂಶ ನಿರೀಕ್ಷಿತವೇ ಆಗಿದೆ. ಹೀಗಾಗಿ, ಕಾಂಗ್ರೆಸ್ ಇದನ್ನು ಒಪ್ಪಿಕೊಂಡು, ಮುಂದಿನ ದಿನಗಳಲ್ಲಿ ಗಾಂಭೀರ್ಯ ಪ್ರದರ್ಶಿಸಬೇಕಾಗಿದೆ.
ಜವಾಬ್ದಾರಿಯುತ ವಿರೋಧ ಪಕ್ಷವಾಗಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಸಹಕಾರ ನೀಡಬೇಕಾಗಿದೆ. ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನವನ್ನು ಉತ್ತಮಪಡಿಸಲು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲ ಪಕ್ಷಗಳೂ ಕೈಜೋಡಿಸುವುದು ಅಗತ್ಯ.ಪಕ್ಷವನ್ನು ಪುನರ್ ಸಂಘಟಿಸುವುದರ ಜತೆಗೆಯುವ ಕಾರ್ಯಕರ್ತರಿಗೆ ಪ್ರೋತ್ಸಾಹ ನೀಡುವ ಮೂಲಕ ಪ್ರಜೆಗಳಲ್ಲಿ ಕಾಂಗ್ರೆಸ್ ತನ್ನ ಬಗ್ಗೆ ಭರವಸೆ ಮೂಡಿಸಬೇಕಾಗಿದೆ
ಮಹದೇವಮ್ಮ,ಕೊಳವಿಗೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.