ಕೊರೊನಾಗೆ ಸಂಬಂಧಿಸಿದಂತೆ ಕೆಲವು ಮಾಧ್ಯಮಗಳು ಇತ್ತೀಚೆಗೆ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡಿ ಸುದ್ದಿ ಬಿತ್ತರಿಸುತ್ತಿವೆ. ಇದು ಭಾರತದ ಸಂವಿಧಾನದ ಆಶಯಗಳನ್ನೇ ಪ್ರಶ್ನಿಸುವಂತಿದೆ.
ಕೊರೊನಾ ವೈರಸ್ ನಿವಾರಣೆಗೆ ಪ್ರಯತ್ನಿಸುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿ. ಹಿಂದಿನ ತಪ್ಪುಗಳನ್ನೇ ಮತ್ತೆ ಮತ್ತೆ ಕೆಣಕುತ್ತಾ ಇಡೀ ವ್ಯವಸ್ಥೆಯನ್ನು ಕಲುಷಿತ ಮಾಡುವ ಬದಲು, ಮುಂದೆ ಮಾಡಬೇಕಾಗಿರುವ ಕೆಲಸಗಳ ಬಗ್ಗೆ ಚಿಂತಿಸುವುದು ಒಳ್ಳೆಯದು. ಈ ದಿಸೆಯಲ್ಲಿ ನಾವೆಲ್ಲರೂ ತೆರೆದ ಹೃದಯದಿಂದ ಯೋಚಿಸೋಣ, ದೇಶದ ಮೌಲ್ಯಗಳನ್ನು ಉಳಿಸೋಣ, ಕೊರೊನಾ ಓಡಿಸೋಣ.
–ಡಾ. ಅಣ್ಣಪ್ಪ ಎನ್. ಮಳೀಮಠ್, ಹಾರೋಹಿತ್ಲು, ಹೊಸನಗರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.