ADVERTISEMENT

ವಾಚಕರ ವಾಣಿ: ಕೋವಿಡ್ ನಿಯಮ; ಸಚಿವರೂ ಪಾಲಿಸಲಿ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 19:45 IST
Last Updated 20 ಆಗಸ್ಟ್ 2020, 19:45 IST

ಸಾಮೂಹಿಕವಾಗಿ ಆಚರಿಸುವ ಉತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆಕೋವಿಡ್ ರೋಗ ನಿಯಂತ್ರಣದ ಸಲುವಾಗಿ ರಾಜ್ಯ ಸರ್ಕಾರವು ಹಲವು ನಿರ್ಬಂಧಗಳನ್ನು ವಿಧಿಸಿದೆ.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಇವುಗಳನ್ನು ಪಾಲಿಸುವುದು ಎಲ್ಲರ ಕರ್ತವ್ಯವೂ ಹೌದು. ಆದರೆ ಈ ನಿಯಮವನ್ನು ಸರ್ಕಾರದ ಭಾಗವಾಗಿರುವ ಜನಪ್ರತಿನಿಧಿಗಳು, ಅಧಿಕಾರಿಗಳೇ ಉಲ್ಲಂಘಿಸುತ್ತಿರುವುದು ವಿಪರ್ಯಾಸ.

ಈಗ ಸರ್ಕಾರಿ ಸಭೆ, ಸಮಾರಂಭಗಳು ಯಥಾರೀತಿಯಲ್ಲಿ ನಡೆಯುತ್ತಿದ್ದು ಶಾಸಕರು, ಸಂಸದರು, ಸಚಿವರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ. ಆದರೆ, ಇಲ್ಲಿ ವ್ಯಕ್ತಿಗತ ಅಂತರ ಮಾಯವಾಗಿ ಆಯಾ ಪಕ್ಷದ ಕಾರ್ಯಕರ್ತರು, ಮುಖಂಡರು, ಜನಸಾಮಾನ್ಯರು ನೂರಾರು ಸಂಖ್ಯೆಯಲ್ಲಿ ಗುಂಪುಗೂಡುವುದು ಸಾಮಾನ್ಯ ಸಂಗತಿ.

ADVERTISEMENT

ಸರ್ಕಾರ ರೂಪಿಸಿರುವ ನಿಯಮಗಳನ್ನು ತಾವು ಮೊದಲು ಅನುಸರಿಸುವ ಮೂಲಕ ಜನಪ್ರತಿನಿಧಿಗಳು ಜನರಿಗೆ ಮಾದರಿಯಾಗಬೇಕಲ್ಲವೇ?
-ನಾರಾಯಣರಾವ ಕುಲಕರ್ಣಿ,ಹಿರೇಅರಳಿಹಳ್ಳಿ, ಯಲಬುರ್ಗಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.