ADVERTISEMENT

ವಾಚಕರ ವಾಣಿ: ಗೆಲುವು ಮೈಮರೆಸದಿರಲಿ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 19:30 IST
Last Updated 12 ನವೆಂಬರ್ 2020, 19:30 IST

ಕೊರೊನಾ ಸಂಕಷ್ಟದ ಈ ಪರಿಸ್ಥಿತಿಯಲ್ಲಿ ಕೆಲವು ಅಡೆತಡೆಗಳ ನಡುವೆಯೂ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದ ಚುನಾವಣಾ ಆಯೋಗ ಮತ್ತು ಮತದಾರರು ಅಭಿನಂದನಾರ್ಹರು. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ದೊರೆತಿರುವ ಗೆಲುವು ಆಡಳಿತ ಪಕ್ಷದ ಒಗ್ಗಟ್ಟನ್ನು ಪ್ರದರ್ಶಿಸಿದೆ ಮತ್ತು ಪಕ್ಷಕ್ಕೆ ಮತ್ತಷ್ಟು ಶಕ್ತಿ ನೀಡಿದೆ. ಆದರೆ ಈ ಗೆಲುವು ಆಡಳಿತ ಪಕ್ಷದ ಮೈಮರೆವಿಗೆ ಕಾರಣವಾಗದೆ, ಹದಗೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿ, ಕೈಗಾರಿಕಾ ವಲಯವನ್ನು ಉನ್ನತೀಕರಿಸುವುದು, ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವುದು ಮತ್ತು ಪ್ರವಾಹದಿಂದ ಉಂಟಾದ ಹಾನಿಯ ನಷ್ಟ ಭರಿಸುವಂತಹ ಸವಾಲುಗಳನ್ನು ಎದುರಿಸಬೇಕಾಗಿದೆ. ಆಡಳಿತದ ಅಗತ್ಯಕ್ಕೆ ಅನುಗುಣವಾಗಿ ಸೂಕ್ತ ನಿರ್ಧಾರ ಕೈಗೊಳ್ಳುವುದರ ಜೊತೆಗೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಬೇಕಿದೆ.

–ರಾಕೇಶ ಆಲಬಾಳ, ದರೂರ, ಅಥಣಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT