ಕೋವಿಡ್-19 ಕಾರಣಕ್ಕಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಪದವಿ ಪ್ರಥಮ ವರ್ಷದ ಪ್ರವೇಶಕ್ಕೆ ನ. 30ರವರೆಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ ಕರ್ನಾಟಕದಲ್ಲಿ ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ತಮ್ಮ ಪ್ರವೇಶ ಪ್ರಕ್ರಿಯೆಯನ್ನು ಮುಗಿಸಿಬಿಟ್ಟಿವೆ. ಸೋಂಕಿನ ಆತಂಕದಿಂದ ಇನ್ನೂ ಪ್ರವೇಶ ಪಡೆಯಲಾಗದ ಅನೇಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಇದರಿಂದ ಅನ್ಯಾಯವಾಗಿದೆ. ಆದ್ದರಿಂದ ಎಲ್ಲ ವಿಶ್ವವಿದ್ಯಾಲಯ ಗಳು ಪ್ರವೇಶದ ಅವಧಿಯನ್ನು ವಿಸ್ತರಿಸಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು.
– ಶ್ರೀಧರ ಬಿ. ನಾಯಕ, ಕಾರವಾರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.