ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಅಧಿಕವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೆ.ಸೆಟ್, ಟಿ.ಇ.ಟಿ.ಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ.
ಹಾಸ್ಟೆಲ್, ಬಾಡಿಗೆ ರೂಮ್ಗಳಲ್ಲಿದ್ದ ಅಭ್ಯರ್ಥಿಗಳು, ಕೊರೊನಾದಿಂದ ಕಾಲೇಜುಗಳಿಗೆ ರಜೆ ಇರುವುದರಿಂದ ತಮ್ಮ ಊರುಗಳಿಗೆ ಮರಳಿದ್ದಾರೆ.
ಈಗ ದೂರದ ಊರುಗಳಿಂದ ಜಿಲ್ಲಾ ಕೇಂದ್ರಗಳಿಗೆ ಬಂದು ಪರೀಕ್ಷೆ ಬರೆಯುವುದು ಅವರಿಗೆ ಕಷ್ಟವಾಗುತ್ತದೆ. ಹೀಗಾಗಿ, ಕಾಲೇಜು, ವಿಶ್ವವಿದ್ಯಾಲಯಗಳು ಪುನರಾರಂಭಗೊಂಡ ಬಳಿಕ ಪರೀಕ್ಷೆಗಳನ್ನು ನಡೆಸುವುದು ಒಳ್ಳೆಯದು.
–ಮಹೇಶ್ ಕೆ.ಎಚ್., ಚಿಕ್ಕಮಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.