‘ಡಿಜಿಟಲ್ ಚುನಾವಣೆ’ಗೆ ಸಕಾಲ ಎಂಬ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಲೇಖನ (ಸಂಗತ, ಅ. 8) ಉತ್ತಮ ಚಿಂತನೆಗಳಿಂದ ಕೂಡಿದೆ. ಕಟ್ಟುನಿಟ್ಟಿನ ಕಾನೂನುಗಳು ಜಾರಿಯಲ್ಲಿದ್ದರೂ ಚುನಾವಣಾ ಅಕ್ರಮಗಳಿಗೆ ಕಡಿವಾಣ ಬೀಳುತ್ತಿಲ್ಲ. ಚುನಾವಣೆಯಿಂದ ಚುನಾವಣೆಗೆ ನಾನಾ ರೀತಿಯಲ್ಲಿ ಅಕ್ರಮಗಳನ್ನು ನಡೆಸುತ್ತಿರುವುದನ್ನು ಕಾಣುತ್ತಿದ್ದೇವೆ. ಪ್ರಸ್ತುತ ಡಿಜಿಟಲ್ ಯುಗದಲ್ಲಿಯಾದರೂ ಪಾರದರ್ಶಕವಾಗಿ ಚುನಾವಣೆ ನಡೆಯಬೇಕಾಗಿದೆ. ಅಭ್ಯರ್ಥಿಗಳು ಚುನಾವಣೆ ಸಮಯದಲ್ಲಿ ಮತದಾರರಿಗೆ ಹಣದ ಆಮಿಷ ಒಡ್ಡದೇ ಇದ್ದರೆ ನಂತರ ‘ಗಳಿಕೆ’ ಕಡೆ ಅವರ ಗಮನ ಕಡಿಮೆಯಾಗಬಹುದೇನೊ?!
– ಡಾ. ಸಂಜೀವಕುಮಾರ ಅತಿವಾಳೆ, ಬೀದರ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.