ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕೋ ಬೇಡವೋ ಎಂದು ಚರ್ಚೆ ಮಾಡುವುದಕ್ಕಿಂತ ಇದನ್ನು ಅವರವರ ಇಷ್ಟಕ್ಕೆ ಬಿಟ್ಟು ಶಿಕ್ಷಣ ಕ್ಷೇತ್ರದ ನಿಜವಾದ ಸಮಸ್ಯೆಗಳ ಬಗ್ಗೆ ಗಮನಹರಿಸೋಣ. ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಶೌಚಾಲಯ, ಕ್ರೀಡಾಂಗಣ, ಗ್ರಂಥಾಲಯ ಒದಗಿಸುವುದರ ಕುರಿತು ಆಸ್ಥೆ ವಹಿಸೋಣ. ಉತ್ತಮ ಶಿಕ್ಷಕರನ್ನು ನೇಮಿಸಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅದಕ್ಕಿಂತ ಭಾಗ್ಯ ಮತ್ತೊಂದಿಲ್ಲ. ಮೂಲ ಸೌಕರ್ಯಗಳ ಕೊರತೆ ನೀಗುವ ಬಗ್ಗೆ ಆರೋಗ್ಯಕರ ಚರ್ಚೆ ನಡೆಯಲಿ. ಅದು ಬಿಟ್ಟು, ಮೊಟ್ಟೆ ವಿಷಯ ಮುಂದಿಟ್ಟುಕೊಂಡು ಗಲಾಟೆ ಎಬ್ಬಿಸುವುದು ಸರಿ ಇಲ್ಲ.
-ಎಂ. ಪರಮೇಶ್ವರ, ಮದ್ದಿಹಳ್ಳಿ, ಹಿರಿಯೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.