ADVERTISEMENT

ಮೌಲ್ಯಮಾಪನ: ವಿಕೇಂದ್ರೀಕೃತವಾಗಲಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 19:30 IST
Last Updated 5 ಜುಲೈ 2020, 19:30 IST

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಇನ್ನು ಮೌಲ್ಯಮಾಪನ ಕಾರ್ಯ ನಡೆಯಬೇಕಿದೆ. ಕೊರೊನಾ ಸೋಂಕಿನ ಈ ಸಂದರ್ಭದಲ್ಲಿ ಶಿಕ್ಷಕರು ಜಿಲ್ಲಾ ಕೇಂದ್ರಗಳಿಗೆ ಬಂದು, ಜೀವದ ಹಂಗು ತೊರೆದು ದಿನಗಟ್ಟಲೆ ಗುಂಪಾಗಿ ಕೂತು ಮೌಲ್ಯಮಾಪನ ಮಾಡುವುದು ಕಷ್ಟಕರ.

ಜಿಲ್ಲಾ ಕೇಂದ್ರಗಳ ಜೊತೆಗೆ ತಾಲ್ಲೂಕು ಕೇಂದ್ರಗಳಲ್ಲೂ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಿದರೆ ಶಿಕ್ಷಕರಿಗೆ ಅನುಕೂಲವಾಗುತ್ತದೆ. ಇದರಿಂದ ಖರ್ಚು ವೆಚ್ಚ ಸ್ವಲ್ಪ ಹೆಚ್ಚಾಗಬಹುದು. ಆದರೆ ಕೊರೊನಾ ಚಿಕಿತ್ಸೆಗೆ ಹಣ ವ್ಯಯಿಸುವ ಬದಲು ಮುಂಜಾಗ್ರತೆಯಾಗಿ ಮೌಲ್ಯಮಾಪನ ಕೇಂದ್ರಗಳ ವಿಕೇಂದ್ರೀಕರಣಕ್ಕೆ ಹಣ ಬಳಸುವುದು ಶಿಕ್ಷಕರ ಹಿತದೃಷ್ಟಿಯಿಂದ ಉತ್ತಮ ನಿರ್ಧಾರವಾಗುತ್ತದೆ.⇒

- ಸಂತೆಬೆನ್ನೂರು ಫೈಜ್ನಟ್ರಾಜ್,ಸಂತೆಬೆನ್ನೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.