ADVERTISEMENT

ಪಠ್ಯೇತರ ಅಂಶಕ್ಕೂ ಬೇಕು ಆದ್ಯತೆ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 13 ಜನವರಿ 2021, 19:30 IST
Last Updated 13 ಜನವರಿ 2021, 19:30 IST

‘ಮಕ್ಕಳಸ್ನೇಹಿ ಕಲಿಕೆಯ ಸವಾಲು’ ಕುರಿತ ಡಾ. ಎಚ್.ಬಿ.ಚಂದ್ರಶೇಖರ್ ಅವರ ಲೇಖನ (ಸಂಗತ, ಜ. 12) ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಚಿಂತನೆಗಳು ಹಾಗೂ ಔಚಿತ್ಯಪೂರ್ಣವಾದ ಅಂಶಗಳಿಂದ ಕೂಡಿದೆ. ಶಿಕ್ಷಕರು ಪಠ್ಯ ವಿಷಯಗಳಿಗೆ ಸೀಮಿತಗೊಳ್ಳದೆ ಪಠ್ಯೇತರ ಅಂಶಗಳನ್ನು ತಮ್ಮ ಬೋಧನೆಯಲ್ಲಿ ಅಳವಡಿಸಿಕೊಂಡು, ಮಕ್ಕಳ ಬುದ್ಧಿಮಟ್ಟ ಉತ್ತಮವಾದ ರೀತಿಯಲ್ಲಿ ಬೆಳವಣಿಗೆ ಆಗುವಂತೆ ಕಾರ್ಯನಿರ್ವಹಿಸಬೇಕಾದ ಅನಿವಾರ್ಯ ಇದೆ.

ಇಂದಿನ ಡಿಜಿಟಲ್ ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ಹಲವರನ್ನು ಹಿಂದಿಕ್ಕಿ ಮುನ್ನುಗ್ಗಬೇಕಾದ ಪರಿಸ್ಥಿತಿಯಲ್ಲಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಯತ್ತ ಶಿಕ್ಷಕರು ಗಮನಹರಿಸಬೇಕಾಗಿದೆ. ಅಂದಾಗ ಮಾತ್ರ ಶಿಕ್ಷಣದಿಂದ ಹೆಚ್ಚಿನ ನಿರೀಕ್ಷೆಯನ್ನು ಮಾಡಬಹುದು.

- ಡಾ. ಸಂಜೀವಕುಮಾರ ಅತಿವಾಳೆ,ಬೀದರ್‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.