ADVERTISEMENT

ವಾಚಕರ ವಾಣಿ: ಚಿಕಿತ್ಸೆಗೆ ನೆರವು ನೀಡಿ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2022, 19:30 IST
Last Updated 11 ನವೆಂಬರ್ 2022, 19:30 IST

ಮೈಸೂರು ಜಿಲ್ಲೆಯ ಎಚ್‌.ಡಿ. ಕೋಟೆ ತಾಲ್ಲೂಕಿನ ಎನ್. ಬೇಗೂರಿನಲ್ಲಿರುವ ನಾನು ಸೋಲಿಗ ಸಮುದಾಯಕ್ಕೆ ಸೇರಿದವನಾಗಿದ್ದು, ಈಚೆಗೆ ಕೆಲ ತಿಂಗಳುಗಳಿಂದ ಯಕೃತ್ತಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದೇನೆ. ಈಗಾಗಲೇ ಚಿಕಿತ್ಸೆಗಾಗಿ ₹ 70 ಸಾವಿರ ಸಾಲ ಮಾಡಿದ್ದೇನೆ. ಕುಟುಂಬದಲ್ಲಿ ದುಡಿಯುವ ವ್ಯಕ್ತಿ ನಾನೊಬ್ಬನೇ ಆಗಿದ್ದು, ಈಗ ಕಾಯಿಲೆಯ ಕಾರಣದಿಂದ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಚಿಕಿತ್ಸೆಯ ಭಾಗವಾಗಿ ವೈದ್ಯರು ಲಿವರ್ ಬಯಾಪ್ಸಿಗೆ ಸೂಚಿಸಿದ್ದಾರೆ. ಅಗತ್ಯ ಬಂದರೆ ಶಸ್ತ್ರಚಿಕಿತ್ಸೆ ನಡೆಸುವುದಾಗಿಯೂ ತಿಳಿಸಿದ್ದಾರೆ. ಈ ಚಿಕಿತ್ಸೆಗೆ ವೆಚ್ಚವಾಗುವ ಹಣವನ್ನು ಭರಿಸುವ ಶಕ್ತಿ ನಮ್ಮ ಕುಟುಂಬಕ್ಕೆ ಇಲ್ಲ. ದಾನಿಗಳು ದಯಮಾಡಿ ನನಗೆ ಆರ್ಥಿಕ ಸಹಾಯ ನೀಡಬೇಕೆಂದು ಮನವಿ. ಬ್ಯಾಂಕ್ ವಿವರ: ರಾಜೇಶ್ ಬಿ., ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಎಚ್‌.ಡಿ. ಕೋಟೆ ಶಾಖೆ, ಖಾತೆ ಸಂಖ್ಯೆ 64076360913, IFSC: SBIN0040068, ಮೊಬೈಲ್: 81050 88530.

-ರಾಜೇಶ್‌ ಬಿ., ಎನ್‌.ಬೇಗೂರು, ಎಚ್‌.ಡಿ.ಕೋಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT