ADVERTISEMENT

ಕನ್ನಡ ವಿಶ್ವವಿದ್ಯಾಲಯದ ಅಸ್ಮಿತೆಗೆ ಧಕ್ಕೆಯಾಗದಿರಲಿ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2020, 19:30 IST
Last Updated 27 ಡಿಸೆಂಬರ್ 2020, 19:30 IST

ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಸೊರಗುತ್ತಿದೆ ಎಂಬ ವಿಷಯ ತಿಳಿದು ವ್ಯಸನವಾಯಿತು. ಕರ್ನಾಟಕದ ಇತಿಹಾಸದಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಸುವರ್ಣಯುಗ ಎನ್ನಲಾಗುತ್ತದೆ. ಅದರ ರಾಜಧಾನಿಯಾಗಿದ್ದ ಹಂಪಿಯಲ್ಲಿ ಸ್ಥಾಪಿತವಾದ ಕನ್ನಡ ವಿಶ್ವವಿದ್ಯಾಲಯವು ಕನ್ನಡ ಅಸ್ಮಿತೆಯ ಪ್ರತೀಕ. ಕನ್ನಡ ಹಾಗೂ ಇತಿಹಾಸಕ್ಕೆ ಸಂಬಂಧಪಟ್ಟ ಹಲವು ಮಹತ್ವದ ಕೃತಿಗಳನ್ನು ವಿಶ್ವವಿದ್ಯಾಲಯ ಹೊರತಂದಿದೆ. ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ವಿಶ್ವವಿದ್ಯಾಲಯಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿ ಅದರ ಏಳ್ಗೆಗೆ ಗಮನ ನೀಡಲಿ.

-ಸಿ.ಸಿದ್ದರಾಜು ಆಲಕೆರೆ, ಮಂಡ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT