ADVERTISEMENT

ವಿತರಣೆ ಸಮರ್ಪಕವಾಗಲಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2019, 20:00 IST
Last Updated 6 ಅಕ್ಟೋಬರ್ 2019, 20:00 IST

ಕೇಂದ್ರ ಸರ್ಕಾರವು ರಾಜ್ಯದ ನೆರೆ ಸಂತ್ರಸ್ತರಿಗಾಗಿಅಂತೂ ₹ 1200 ಕೋಟಿ ಮಧ್ಯಂತರ ಪರಿಹಾರ ನೀಡಿದೆ. ಬಿಡುಗಡೆಯಾದ ಹಣವನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸುವ ದೊಡ್ಡ ಜವಾಬ್ದಾರಿ ಜಿಲ್ಲಾಧಿಕಾರಿಗಳಿಗಿದೆ. ಸಂಸದರು, ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಕಣ್ಗಾವಲಲ್ಲಿ ಪರಿಹಾರ ಕಾರ್ಯ ಕ್ರಮಬದ್ಧವಾಗಿ ನಡೆಯಬೇಕು.

ಸ್ವಲ್ಪ ಎಚ್ಚರ ತಪ್ಪಿದರೂ ಹಣ ದೋಚಲು ಮಧ್ಯವರ್ತಿಗಳು ಕಾದಿರುತ್ತಾರೆ. ಸೂಕ್ತ ಸಮಿತಿ ನೇಮಿಸಿ, ಅದರ ನಿಗಾದಲ್ಲಿ ಪರಿಹಾರ ವಿತರಣೆ ನಡೆಯುವಂತೆ ನೋಡಿಕೊಳ್ಳಬೇಕು.

-ಜ್ಯೋತಿ ಭದ್ರಶೆಟ್ಟಿ,ವಿಜಯಪುರ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.