ನಟ ‘ಸಂಚಾರಿ’ ವಿಜಯ್ ತಮ್ಮ ಗೆಳೆಯನೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಇಹಲೋಕವನ್ನು ತ್ಯಜಿಸಿದ್ದಾರೆ. ಇಬ್ಬರೂ ಸವಾರರು ಹೆಲ್ಮೆಟ್ ಧರಿಸದೆ ಇದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಸಮಾಜಕ್ಕೆ ಮಾದರಿಯಾಗಬೇಕಾದ ಇಂತಹ ಪ್ರಸಿದ್ಧ ವ್ಯಕ್ತಿಯೇ ಈ ರೀತಿ ಹೆಲ್ಮೆಟ್ ಧರಿಸದೆ ಕರ್ಫ್ಯೂ ಸಮಯದಲ್ಲಿ ರಸ್ತೆಯಲ್ಲಿ ಅಡ್ಡಾಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿರುವುದು ಸರಿಯಲ್ಲ.
ಸಾರ್ವಜನಿಕ ಜೀವನದಲ್ಲಿ ಇರುವವರು ಮಾದರಿಯಾಗಿ ಬದುಕಿ ಬೇರೆಯವರಿಗೆ ಪ್ರೇರಣೆಯಾಗಬೇಕು. ಇನ್ನಾದರೂ ನಾಗರಿಕರು ಸಂಚಾರ ನಿಯಮಗಳನ್ನು ಗೌರವಿಸಿ ಅದರಂತೆ ನಡೆದು ತಮ್ಮ ಜೀವವನ್ನು ಕಾಪಾಡಿಕೊಳ್ಳಲಿ. ಪ್ರಾಣಕ್ಕಿಂತ ಯಾವುದೂ ಹೆಚ್ಚಲ್ಲ.→→
- ಪತ್ತಂಗಿ ಎಸ್. ಮುರಳಿ,ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.