ADVERTISEMENT

ಸಂಚಾರ ನಿಯಮ ಪಾಲನೆ ಆದ್ಯತೆಯಾಗಲಿ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 19:31 IST
Last Updated 15 ಜೂನ್ 2021, 19:31 IST

ನಟ ‘ಸಂಚಾರಿ’ ವಿಜಯ್ ತಮ್ಮ ಗೆಳೆಯನೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಇಹಲೋಕವನ್ನು ತ್ಯಜಿಸಿದ್ದಾರೆ. ಇಬ್ಬರೂ ಸವಾರರು ಹೆಲ್ಮೆಟ್ ಧರಿಸದೆ ಇದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಸಮಾಜಕ್ಕೆ ಮಾದರಿಯಾಗಬೇಕಾದ ಇಂತಹ ಪ್ರಸಿದ್ಧ ವ್ಯಕ್ತಿಯೇ ಈ ರೀತಿ ಹೆಲ್ಮೆಟ್ ಧರಿಸದೆ ಕರ್ಫ್ಯೂ ಸಮಯದಲ್ಲಿ ರಸ್ತೆಯಲ್ಲಿ ಅಡ್ಡಾಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿರುವುದು ಸರಿಯಲ್ಲ.

ಸಾರ್ವಜನಿಕ ಜೀವನದಲ್ಲಿ ಇರುವವರು ಮಾದರಿಯಾಗಿ ಬದುಕಿ ಬೇರೆಯವರಿಗೆ ಪ್ರೇರಣೆಯಾಗಬೇಕು. ಇನ್ನಾದರೂ ನಾಗರಿಕರು ಸಂಚಾರ ನಿಯಮಗಳನ್ನು ಗೌರವಿಸಿ ಅದರಂತೆ ನಡೆದು ತಮ್ಮ ಜೀವವನ್ನು ಕಾಪಾಡಿಕೊಳ್ಳಲಿ. ಪ್ರಾಣಕ್ಕಿಂತ ಯಾವುದೂ ಹೆಚ್ಚಲ್ಲ.→→

- ಪತ್ತಂಗಿ ಎಸ್. ಮುರಳಿ,ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.