ADVERTISEMENT

ವಾಚಕರ ವಾಣಿ: ಅನುದಾನದ ಭರವಸೆ ಹುಸಿಯಾಗದಿರಲಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 19:45 IST
Last Updated 22 ಅಕ್ಟೋಬರ್ 2020, 19:45 IST

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಮಳೆ ಹಾಗೂ ಪ್ರವಾಹಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ, ಹಾನಿಗೊಳಗಾದ ಮನೆಗಳ ಪುನರ್‌ನಿರ್ಮಾಣಕ್ಕೆ ಪರಿಹಾರ ಘೋಷಿಸಿದ್ದಾರೆ.

ಕಳೆದ ವರ್ಷ ಭಾರಿ ಮಳೆ ಬಂದಾಗ ಯಡಿಯೂರಪ್ಪ ಅವರು ತೊಂದರೆಗೆ ಒಳಗಾದ ಜನರ ನೋವನ್ನು ನೇರವಾಗಿ ಆಲಿಸಿ, ಪರಿಹಾರ ಒದಗಿಸುವ ಭರವಸೆ ನೀಡಿ ಹೋಗಿದ್ದರು. ಆದರೆ ಆ ಭರವಸೆಯನ್ನು ಇನ್ನೂ ಈಡೇರಿಸಲು ಸಾಧ್ಯವಾಗಿಲ್ಲ. ಮನೆಗಳು, ಜಾನುವಾರುಗಳನ್ನು ಕಳೆದುಕೊಂಡವರಿಗೆ ಪರಿಹಾರ ಸಿಕ್ಕಿಲ್ಲ. ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯಲ್ಲಿ ಮಂಜೂರಾದ ಮನೆಗಳಿಗೇ ಇನ್ನೂ ಅನುದಾನ ದೊರೆತಿಲ್ಲ. ಹೀಗಿರುವಾಗ ಇಂತಹ ಭರವಸೆಯು ಭರವಸೆ ಮಾತ್ರವೇ ಆಗಿ ಉಳಿಯದೆ, ಅತಿ ಶೀಘ್ರವಾಗಿ ಮನೆಗಳನ್ನು ನಿರ್ಮಿಸುವುದಕ್ಕೆ ಪೂರಕವಾಗಿ ಅನುದಾನ ಬಿಡುಗಡೆಯಾಗಲಿ.

-ಜಗನ್ನಾಥ ಎಸ್. ನಿಡಗುಂದಾ, ಚಿಂಚೋಳಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.