ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ತಮ್ಮ ಎರಡೂವರೆ ವರ್ಷದ ಪುತ್ರಿ ಖುಷಿಯನ್ನು ಅಂಗನವಾಡಿಗೆ ಸೇರಿಸಿ ಅಲ್ಲಿನ ಇತರ ಮಕ್ಕಳ ಜೊತೆ ಬೆರೆತು ಕಲಿಯುವಂತೆ ಮಾಡಿದ್ದಾರೆ(ಪ್ರ.ವಾ., ಅ. 16). ಈ ಮೂಲಕ, ಸರ್ಕಾರಿ ಶಾಲೆಗಳ ಪರ ಬರೀ ಭಾಷಣ ಮಾಡದೆ ಸ್ವತಃ ಅನುಸರಿಸಿದ್ದಾರೆ.
ಇದನ್ನೂ ಓದಿ:ಕೊಡಗು ಎಸ್ಪಿ ಪುತ್ರಿ ಅಂಗನವಾಡಿಯಲ್ಲಿ ಕಲಿಕೆ
ಇವರ ನಡವಳಿಕೆ ಮಾದರಿಯದಾಗಿದ್ದು ಎಲ್ಲ ಸರ್ಕಾರಿ ಅಧಿಕಾರಿಗಳೂ ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿದರೆ, ಅವುಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಯಾಗುವುದರಲ್ಲಿ ಸಂಶಯವಿಲ್ಲ.
-ಡಿ.ಪ್ರಸನ್ನ ಕುಮಾರ್,ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.