ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ಕಂದಾಯ ಇಲಾಖೆಯ ನಿವೃತ್ತರ ಸೇವೆಯನ್ನು ಪಡೆಯಲು ಮುಂದಾಗಿದೆ (ಪ್ರ.ವಾ., ಜ. 3). ಎರಡೆರಡು ಪದವಿಗಳನ್ನು ಪಡೆದಿದ್ದರೂ ಕೆಲಸವಿಲ್ಲದೆ ಯುವಜನರು ಪರಿತಪಿಸುತ್ತಿರುವಾಗ, ನಿವೃತ್ತಿ ಹೊಂದಿರುವವರನ್ನು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ತೆಗೆದುಕೊಂಡರೆ ಹೇಗೆ? ನಿವೃತ್ತಿ ಆದವರಿಗೆ ವಯಸ್ಸಾಗಿರುತ್ತದೆ, ಅಲ್ಲದೆ ಅವರ ಜೀವನ ನಿರ್ವಹಣೆಗೆ ಪಿಂಚಣಿ ಬರುತ್ತಿರುತ್ತದೆ. ಹಾಗಿದ್ದರೆ ನಿರುದ್ಯೋಗಿ ಯುವಜನರು ಉದ್ಯೋಗಕ್ಕೆ ಏನು ಮಾಡಬೇಕು? ಗುತ್ತಿಗೆ ಆಧಾರದಲ್ಲಿ ನಿವೃತ್ತ ಅಧಿಕಾರಿ ಮತ್ತು ಸಿಬ್ಬಂದಿಯನ್ನು ತೆಗೆದುಕೊಳ್ಳದಂತೆ ನಿಯಮ ರೂಪಿಸಿ, ಆ ಮೂಲಕ ಯುವಜನರಿಗೆ ಉದ್ಯೋಗ ಒದಗಿಸಲು ಸರ್ಕಾರ ನೆರವಾಗಬೇಕು.
ಉತ್ತಮ ಆಡಳಿತ ವ್ಯವಸ್ಥೆಯನ್ನು ತರುವುದಕ್ಕೆ ಪೂರಕವಾಗಿ, ನಿವೃತ್ತ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿಕೊಂಡು, ಅವರಿಂದ ಸಲಹೆ– ಸೂಚನೆಗಳನ್ನು ಪಡೆದುಕೊಳ್ಳಬಹುದು.
–ಗೌಡಯ್ಯ, ಮೈಸೂರು
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.