ಸರ್ಕಾರಿ ಜಮೀನಿನಲ್ಲಿ ಅಕ್ರಮ ಸಾಗುವಳಿ ಮಾಡುತ್ತಿರುವ ರೈತರಿಂದ ಅದನ್ನು ಸಕ್ರಮಗೊಳಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಕ್ಟೋಬರ್ 6ರಂದು ಆದೇಶ ಹೊರಡಿಸಿದ್ದರು. ಇಂಥ ಅರ್ಜಿಗಳನ್ನು ಸ್ವೀಕರಿಸುವಂತೆ ತಹಶೀಲ್ದಾರರುಗಳಿಗೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನವನ್ನೂ ಆದೇಶದಲ್ಲಿ ನೀಡಲಾಗಿತ್ತು.
ಈ ಆದೇಶ ಹೊರಡಿಸಿ ಒಂದೂವರೆ ತಿಂಗಳು ಕಳೆದರೂ ಯಾವ ತಾಲ್ಲೂಕಿನಲ್ಲೂ ಅರ್ಜಿಗಳನ್ನು ಸ್ವೀಕರಿಸುತ್ತಿಲ್ಲ. ಈ ಕುರಿತು ತಾಲ್ಲೂಕು ಕಚೇರಿಗಳಲ್ಲಿ ವಿಚಾರಿಸಿದರೆ ಜಿಲ್ಲಾಧಿಕಾರಿಯಿಂದ ನಮಗಿನ್ನೂ ಸೂಚನೆ ಬಂದಿಲ್ಲ ಎಂಬ ಉತ್ತರ ಬರುತ್ತಿದೆ. ಕಂದಾಯ ಇಲಾಖೆಯ ಮೇಲಧಿಕಾರಿಗಳು ಇತ್ತ ಗಮನಹರಿಸಿ, ಇಲಾಖೆ ಹೊರಡಿಸಿರುವ ಆದೇಶವನ್ನು ಅನುಷ್ಠಾನಕ್ಕೆ ತರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಅರ್ಜಿ ಸ್ವೀಕರಿಸುವ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸಬೇಕು.
ಲಕ್ಷ್ಮೀಕಾಂತರಾಜು ಎಂ.ಜಿ., ಮಠಗ್ರಾಮ,ಗುಬ್ಬಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.