ADVERTISEMENT

ಪಿಂಚಣಿ ಭತ್ಯೆ: ಹಿಮಾಚಲ ಮಾದರಿಯಾಗಲಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 20:30 IST
Last Updated 6 ನವೆಂಬರ್ 2019, 20:30 IST

ನಾನೊಬ್ಬ ರಾಜ್ಯ ಸರ್ಕಾರದ ನಿವೃತ್ತ ನೌಕರ. ಸರ್ಕಾರ ನೀಡುತ್ತಿರುವ ಪಿಂಚಣಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತಿದೆ. ಆದರೆ, ಆರೋಗ್ಯ ಸಮಸ್ಯೆಗಳಿಂದಾಗಿ ಈ ತುಟ್ಟಿ ಕಾಲದಲ್ಲಿ ಬದುಕು ನಡೆಸುವುದು ಕಷ್ಟವಾಗುತ್ತಿದೆ.

ಹಿಮಾಚಲ ಪ್ರದೇಶವು 2014ರಿಂದ ಸರ್ಕಾರಿ ನೌಕರರಿಗೆ 65, 70 ಮತ್ತು 75 ವರ್ಷ ಪೂರ್ಣಗೊಂಡಾಗ ಕ್ರಮವಾಗಿ ಶೇ 5, 10 ಹಾಗೂ ಶೇ15 ಪಿಂಚಣಿ ಭತ್ಯೆ ಮಂಜೂರು ಮಾಡುತ್ತಿದೆ. ಇದನ್ನು ದೇಶದಲ್ಲಿನ ಎಲ್ಲಾ ರಾಜ್ಯಗಳೂ ಅನುಸರಿಸಿದರೆ ನನ್ನಂತಹ ನಿವೃತ್ತ ನೌಕರರಿಗೆ ಬಹಳ ಅನುಕೂಲ ಆಗುತ್ತದೆ. ಕರ್ನಾಟಕ ಸರ್ಕಾರ ಈ ಕುರಿತು ಪರಿಶೀಲನೆ ನಡೆಸಿ, ಅಗತ್ಯ ಆದೇಶವನ್ನು ಹೊರಡಿಸಲಿ.

–ಟಿ.ಜಿ. ಸತೀಶ್, ಶಿವಮೊಗ್ಗ

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT