ಶಾಲಾ ಮಕ್ಕಳಿಗೆ ಕೋಳಿಮೊಟ್ಟೆ ಅಥವಾ ಬಾಳೆಹಣ್ಣು ನೀಡುವ ಯೋಜನೆ ಏಕೋಪಾಧ್ಯಾಯ ಶಾಲಾ ಶಿಕ್ಷಕರಿಗೆ ತುಂಬಾ ಹೊರೆ ಆಗಲಿದೆ. ಶಾಲೆ ಮತ್ತು ಅಂಗನವಾಡಿಗಳಲ್ಲಿ ನೀಡುವ ಎಲ್ಲಾ ಬಗೆಯ ಆಹಾರ ವ್ಯವಸ್ಥೆಗೆ ಪ್ರತ್ಯೇಕ ಸಿಬ್ಬಂದಿ ಮತ್ತು ಪ್ರತ್ಯೇಕ ವ್ಯವಸ್ಥೆ ನಿಗದಿಪಡಿಸುವುದು ಒಳಿತು. ಇದರಿಂದ ಶಾಲಾ ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಕಲಿಕೆ ಕಡೆಗೆ ಗಮನಹರಿಸಲು ಅನುಕೂಲ ಆಗುತ್ತದೆ.
–ಮಂಜುನಾಥ ದುಬಲಗುಂಡೆ, ಚಿಮ್ಮನಚೋಡ, ಚಿಂಚೋಳಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.