ರಾಜ್ಯ ಕಂದಾಯ ಇಲಾಖೆಯ ವೆಬ್ಸೈಟ್ನಲ್ಲಿ ಒಂದು ವಾರದಿಂದಲೂ ತಾಂತ್ರಿಕ ತೊಂದರೆ ಉಂಟಾಗುತ್ತಿದೆ. ವೆಬ್ಸೈಟ್ಗೆ ಭೇಟಿ ಕೊಡುವವರಿಗೆ ‘ಮೇಲ್ದರ್ಜೆಗೆ ಏರಿಸಲಾಗುತ್ತಿದೆ’ ಎಂಬ ಉತ್ತರ ದೊರೆಯುತ್ತಿದೆ. ಇದರಿಂದ ಸಂಬಂಧಪಟ್ಟ ಇಲಾಖೆಯಿಂದ ಜಾತಿ, ಆದಾಯ ಪ್ರಮಾಣಪತ್ರಗಳನ್ನು ಪಡೆಯಲು ವಿಳಂಬವಾಗುತ್ತಿದೆ. ಸೂಕ್ತ ಸಮಯದಲ್ಲಿ ದಾಖಲೆಗಳು ಸಿಗದೆ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ.
ನೇಮಕಾತಿಗೆ ಅರ್ಜಿ ಸಲ್ಲಿಸಲು ಆಯುಷ್ ವೈದ್ಯರು ಹಾಗೂ ಇನ್ನಿತರ ಬೋಧಕ ವರ್ಗಕ್ಕೆ ಈಗಾಗಲೇ ವಿಳಂಬವಾಗಿ, ಸಕಾಲದಲ್ಲಿ ದಾಖಲೆಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜಾತಿ ಹಾಗೂ ಆದಾಯದ ಆಧಾರದಲ್ಲಿ ಮೀಸಲಾತಿ ಕೋರುವವರಿಗೆ ಈ ತಾಂತ್ರಿಕ ತೊಂದರೆ ಒಂದು ಶಾಪವಾಗಿ ಪರಿಣಮಿಸಿದೆ. ಇಲಾಖೆಯು ಉದ್ಯೋಗಾಕಾಂಕ್ಷಿಗಳಿಗೆ ಅನುವಾಗುವಂತೆ ವೆಬ್ಸೈಟ್ನ ಸುಸೂತ್ರ ಕಾರ್ಯನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳಬೇಕು.
ಡಾ. ಲಕ್ಷ್ಮಣ ವಿ.ಎ.,ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.