ಸ್ವಾತಂತ್ರ್ಯ ದಿನಾಚರಣೆಯಂದು ಶಾಲಾಕಾಲೇಜು, ಕಚೇರಿಗಳಲ್ಲಿ ಬಹುಮಟ್ಟಿಗೆ ಪರಿಸರಕ್ಕೆ ಹಾನಿಯಾಗು
ವಂತಹ ಪ್ಲಾಸ್ಟಿಕ್ನಿಂದ ತಯಾರಿಸಿದ ಬಾವುಟ ಮತ್ತಿತರ ವಸ್ತುಗಳನ್ನು ಬಳಸಲಾಗುತ್ತದೆ. ಇದು ಸರಿಯಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯು ಅರಿವು ಮೂಡಿಸಬೇಕು. ನಮ್ಮ ದೇಶದ ಹೆಮ್ಮೆಯ ಪ್ರತೀಕವಾದ ಖಾದಿ ಧ್ವಜ ಬಳಸುವಂತೆ ಆಗಬೇಕು.
ಪ್ಲಾಸ್ಟಿಕ್ ಧ್ವಜ ಬಳಕೆ ಬೇಡ. ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುವ ಗಣ್ಯರು ಹಾಗೂ ಅತಿಥಿಗಳಿಗೆ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಗಾಜಿನ ಲೋಟಗಳಲ್ಲಿ ನೀರನ್ನು ನೀಡಬೇಕು. ಈ ಮೂಲಕ, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯು ಪರಿಸರಸ್ನೇಹಿ ಸ್ವಾತಂತ್ರ್ಯ ದಿನಾಚರಣೆಯಾಗಲು ಎಲ್ಲರೂ ಸಹಕರಿಸೋಣ.
ಸುದರ್ಶನ್ ಎಚ್.ಎನ್., ಹೆತ್ತೂರು, ಹಾಸನ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.