ADVERTISEMENT

ಕನ್ನಡ ಶಿಕ್ಷಕರ ನೇಮಕಾತಿ ಎಂದು?

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 19:39 IST
Last Updated 20 ಸೆಪ್ಟೆಂಬರ್ 2019, 19:39 IST

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಶಿಕ್ಷಣ ಇಲಾಖೆಯು ಗಣಿತ, ವಿಜ್ಞಾನ ಮೊದಲಾದ ವಿಷಯಗಳಿಗೆ ಶಿಕ್ಷಕರನ್ನು ನೇಮಿಸಿಕೊಳ್ಳುತ್ತಾ ಬಂದಿದೆ. ಆದರೆ ಕನ್ನಡ ಭಾಷಾ ಶಿಕ್ಷಕರನ್ನು ಸರಿಯಾಗಿ ನೇಮಕ ಮಾಡಿಕೊಳ್ಳುತ್ತಿಲ್ಲ. ಹೀಗಾದರೆ, ಕನ್ನಡವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಉನ್ನತ ಶಿಕ್ಷಣ ಮಾಡಿದವರ ಪಾಡು ಏನು?

ಶಾಲೆಗಳಲ್ಲಿ ಕನ್ನಡದ ವಾತಾವರಣ ಮೂಡುವುದಾದರೂ ಹೇಗೆ? ಕರ್ನಾಟಕದಲ್ಲಿಯೇ ಕನ್ನಡವನ್ನು ಹೀಗೆ ಅವಗಣನೆ ಮಾಡುವುದು ಸರಿಯೇ? ಸುರೇಶ್ ಕುಮಾರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಉತ್ಸಾಹದಿಂದ ಮಾತನಾಡುತ್ತಿದ್ದಾರೆ. ಅವರಿಂದ ಸಕಾರಾತ್ಮಕ ನಿರ್ಧಾರವನ್ನು ನಿರೀಕ್ಷಿಸಬಹುದೇ?

– ಗಿರೀಶ್ ಮತ್ತೇರ,ಹೊಳಲ್ಕೆರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.