ADVERTISEMENT

ಗುಡುಗಿಗಿಂತ ಮಿಂಚೇ ಬಲಶಾಲಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2019, 20:00 IST
Last Updated 13 ಅಕ್ಟೋಬರ್ 2019, 20:00 IST

‘ಬಿಎಸ್‌ವೈ ಈಗ ಬರೀ ಮಿಂಚು’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚಟಾಕಿ ಹಾರಿಸಿದ್ದಾರೆ. (ಪ್ರ.ವಾ., ಅ. 13). ಈ ಮಾತನ್ನು ವೈಜ್ಞಾನಿಕ ಆಯಾಮದಲ್ಲಿ ನೋಡಿದಾಗ, ಗುಡುಗಿಗಿಂತ ಮಿಂಚು ಹೆಚ್ಚು ಬಲಶಾಲಿ ಎಂಬ ಸಂಗತಿ ವೇದ್ಯವಾಗುತ್ತದೆ. ಮಿಂಚು ಉಂಟಾದಾಗ ಅಪಾರ ಪ್ರಮಾಣದ ಶಕ್ತಿ ಪ್ರವಹಿಸುತ್ತದೆ.

ಗುಡುಗು ಕೇವಲ ಸದ್ದು ಮಾಡುತ್ತದೆ. ಒಂದರ್ಥದಲ್ಲಿ, ಬಿ.ಎಸ್‌.ಯಡಿಯೂರಪ್ಪನವರು ಹಿಂದೆಂದಿಗಿಂತಲೂ ಹೆಚ್ಚು ಬಲಶಾಲಿಯಾಗಿದ್ದಾರೆ ಎಂದು ಪರೋಕ್ಷವಾಗಿ ಪ್ರತಿಪಾದಿಸಿದ್ದಾರೆ ಎಂತಲೂ ಅರ್ಥೈಸಿಕೊಳ್ಳಬಹುದೇನೊ!

-ವೆಂಕಟೇಶ ಮುದಗಲ್,ಕಲಬುರ್ಗಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.