ನಾಡಪ್ರಭು ಕೆಂಪೇಗೌಡರ ದಿನಾಚರಣೆ ನಿಮಿತ್ತ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪ್ರತಿಮೆ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಎಲ್ಲ ರಾಜಕೀಯ ಮುಖಂಡರು ಭಾಗವಹಿಸಿ, ಒಬ್ಬರನ್ನೊಬ್ಬರು ಅಭಿನಂದಿಸಿದ್ದು ಸಂತೋಷದ ವಿಚಾರ. ಈ ಬೆಂಬಲ, ಸಹಕಾರ ಕೇವಲ ದಿನಾಚರಣೆಗೆ ಸೀಮಿತವಾಗದೆ, ಜನಸಾಮಾನ್ಯರ ದಿನನಿತ್ಯದ ಕಷ್ಟಗಳಿಗೆ ಸ್ಪಂದಿಸುವಲ್ಲಿ, ಜನೋಪಯೋಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ, ನಾಡಿನ ಸಮಗ್ರ ಅಭಿವೃದ್ಧಿಯ ನೆಲೆಯಲ್ಲಿ ಪಕ್ಷಾತೀತವಾಗಿ ನಡೆಯುವಂತಾಗಲಿ.
-ಮಹಾಂತೇಶ ಮಾಗನೂರ, ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.