ADVERTISEMENT

ಕೆಪಿಎಸ್‌ಸಿ ಅಕ್ರಮದ ಪರಿಗೆ ಬೆರಗಾದೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2019, 19:45 IST
Last Updated 21 ಜೂನ್ 2019, 19:45 IST

ಕರ್ನಾಟಕ ಲೋಕಸೇವಾ ಆಯೋಗವು ಅಕ್ರಮಗಳಿಗೆ ಅವಕಾಶ ನೀಡಿ ಭ್ರಷ್ಟಾಚಾರ ಎಸಗುತ್ತಿರುವ ಕುರಿತ ವರದಿ ಓದಿ (ಪ್ರ.ವಾ., ಜೂನ್‌ 20) ಬೆರಗಾದೆ. 2015ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯ ವ್ಯಕ್ತಿತ್ವ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಸಬೇಕು.ನೇಮಕಾತಿಯ ನೆಪದಲ್ಲಿ ಇಂತಹ ವಿಲಕ್ಷಣ ರೀತಿಯ ಭ್ರಷ್ಟಾಚಾರಕ್ಕೆ ಇಳಿಯುತ್ತಿರುವುದು ಅಸಹ್ಯ ಹುಟ್ಟಿಸುತ್ತದೆ. ಈ ಬೆಳವಣಿಗೆಗಳು, ಮುಂದೆ ಈ ಪರೀಕ್ಷೆ ಬರೆಯುವ ಕನಸು ಹೊಂದಿರುವ ಅಭ್ಯರ್ಥಿಗಳಿಗೆ ಆಘಾತ ಉಂಟುಮಾಡುತ್ತವೆ. ಇದು ನಿಜಕ್ಕೂ ದುರ್ದೈವದ ಸಂಗತಿ.

–ದಸ್ತಗೀರ ನದಾಫ್ ಯಳಸಂಗಿ,ಆಳಂದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT