ADVERTISEMENT

ಪಿಯುಸಿ ಅಂಕ ಆಧರಿಸಿ ಸೀಟ್‌ ಹಂಚಿಕೆಯಾಗಲಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 10 ಜುಲೈ 2020, 19:31 IST
Last Updated 10 ಜುಲೈ 2020, 19:31 IST

ಸಿಇಟಿಯನ್ನು ಇದೇ 30 ಮತ್ತು 31ರಂದು ನಡೆಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಆ ವೇಳೆಗೆ ಕೊರೊನಾ ಸೋಂಕಿನ ಪರಿಸ್ಥಿತಿ ಏನಾಗಿರುತ್ತದೆ ಎಂಬುದು ನಿರೀಕ್ಷೆಗೆ ನಿಲುಕದ ಸಂಗತಿ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸರ್ಕಾರ ಇತ್ತೀಚೆಗೆ ಯಶಸ್ವಿಯಾಗಿ ನಡೆಸಿತು. ಎಸ್‌ಎಸ್‌ಎಲ್‌ಸಿ ನಂತರದ ಶಿಕ್ಷಣಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಲು ಈ ಪರೀಕ್ಷೆ ನಡೆಸಬೇಕಾಯಿತು ಎಂಬುದನ್ನು ಎಲ್ಲರೂ ಒಪ್ಪುತ್ತಾರೆ.

ಪಿಯುಸಿ ಪರೀಕ್ಷೆ ಈಗ ಮುಗಿದಿದೆ. ಪಿಯುಸಿ ಅಂಕಗಳ ಆಧಾರದ ಮೇಲೆ ಅಥವಾ ಸಿಬಿಎಸ್‌ಇಯಂತಹ ಯಾವುದೇ ಮಂಡಳಿಯ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‌ಗಳಿಗೆ ಸೀಟುಗಳನ್ನು ಹಂಚಲು ಸಿಇಟಿ ಸೆಲ್‌ ಕ್ರಮ ತೆಗೆದುಕೊಳ್ಳಬೇಕು. ಕೊರೊನಾ ಸೋಂಕು ಹರಡುವಿಕೆಯ ಭೀತಿ ಇರುವಾಗ ಇಂತಹದೊಂದು ಉಪಕ್ರಮ ಅಗತ್ಯ. ಇದರಿಂದ ಪೋಷಕರು ಮತ್ತು ವಿದ್ಯಾರ್ಥಿಗಳು ಮಾತ್ರವಲ್ಲದೆ ಸರ್ಕಾರಿ ಸಿಬ್ಬಂದಿ ಸಹ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಆಗುತ್ತದೆ.

- ಡಾ. ಉದಯ ಕುಮಾರ್‌,ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.