ADVERTISEMENT

ವಾಚಕರ ವಾಣಿ| ಸೋಂಕು ಪರಿಣಾಮಕಾರಿ ನಿಯಂತ್ರಣಕ್ಕೆ ಜನಾರೋಗ್ಯ ತಜ್ಞರ ಸಲಹೆ ಮುಖ್ಯ

​ಪ್ರಜಾವಾಣಿ ವಾರ್ತೆ
Published 13 ಮೇ 2020, 19:45 IST
Last Updated 13 ಮೇ 2020, 19:45 IST
ಕೊರೊನಾ ವೈರಸ್‌ ಪತ್ತೆಯಾಗಿರುವ ಪ್ರದೇಶದಲ್ಲಿ ಆರೋಗ್ಯ ಸಿಬ್ಬಂದಿ ಮಾಹಿತಿ ಸಂಗ್ರಹಣೆಯಲ್ಲಿ ತೊಡಗಿರುವುದು
ಕೊರೊನಾ ವೈರಸ್‌ ಪತ್ತೆಯಾಗಿರುವ ಪ್ರದೇಶದಲ್ಲಿ ಆರೋಗ್ಯ ಸಿಬ್ಬಂದಿ ಮಾಹಿತಿ ಸಂಗ್ರಹಣೆಯಲ್ಲಿ ತೊಡಗಿರುವುದು    

ಕೊರೊನಾ ಸೋಂಕಿನ ತಪಾಸಣೆ ಹೆಚ್ಚಾದಂತೆ ಪಾಸಿಟಿವ್ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಈ ಕುರಿತು ಟಿ.ವಿ ಚಾನೆಲ್‍ವೊಂದಕ್ಕೆ ಸಂದರ್ಶನ ನೀಡಿದ ಬೆಂಗಳೂರಿನ ಪಬ್ಲಿಕ್ ಹೆಲ್ತ್‌ ಫೌಂಡೇಶನ್ ಆಫ್ ಇಂಡಿಯಾದ ಜನಾರೋಗ್ಯ ತಜ್ಞರೊಬ್ಬರ ಅಭಿಪ್ರಾಯದಂತೆ, ಎಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತವೆಯೋ ಅದು ಉತ್ತಮ ಬೆಳವಣಿಗೆ. ಅಲ್ಲಿನ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯು ಉತ್ತಮ ಸೋಂಕು ಸರ್ವೇಕ್ಷಣೆ ಕೈಗೊಂಡಿದೆ ಎಂದು ಅರ್ಥ. ಒಂದೊಮ್ಮೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ ಅಥವಾ ಪಾಸಿಟಿವ್ ಪ್ರಕರಣಗಳೇ ಇಲ್ಲ ಎಂದರೆ, ಅದು ಎರಡು ಸಾಧ್ಯತೆಗಳನ್ನು ಸೂಚಿಸುತ್ತದೆ. ಒಂದು, ಅಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ಇಲ್ಲವೇ ಇಲ್ಲ ಎಂದು, ಎರಡನೆಯದು, ಪಾಸಿಟಿವ್ ಪ್ರಕರಣಗಳು ಇದ್ದರೂ ನಿಗದಿತ ಸಂಖ್ಯೆಯಲ್ಲಿ ತಪಾಸಣೆ ಆಗದ ಕಾರಣ ಪಾಸಿಟಿವ್ ಪ್ರಕರಣಗಳು ಹೊರಬರುತ್ತಿಲ್ಲ ಎಂದು.

ಈ ಮಾತನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ವಿವಿಧ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿನ ಜನಾರೋಗ್ಯ ತಜ್ಞರ ಸಲಹೆ ಪಡೆಯಬೇಕು. ಅಷ್ಟೇ ಏಕೆ, ಈ ಸೋಂಕನ್ನು ಆಮೂಲಾಗ್ರವಾಗಿ ನಿಯಂತ್ರಿಸುವ ಸಂಪೂರ್ಣ ಜವಾಬ್ದಾರಿಯನ್ನು ಈ ತಜ್ಞರಿಗೇ ವಹಿಸಿಕೊಡಬೇಕು. ಇದರಿಂದ ಕೊರೊನಾದಂತಹ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯ.

- ಭುವನೇಶ್ವರಿ ಅಚ್ಚೀಗಾಂವ,ವಿಜಯಪುರ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.