ADVERTISEMENT

ಬೇಲಿ ಬೇಕಿರುವುದು ಮನುಷ್ಯನಿಗೆ!

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 20:00 IST
Last Updated 3 ಜನವರಿ 2019, 20:00 IST

ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಆನೆಗಳು ಕಾಡಿನಿಂದ ಹೊರಬರುವುದನ್ನು ತಡೆಯಲು ತೂಗುಬೇಲಿ ನಿರ್ಮಿಸಿರುವುದು ವರದಿಯಾಗಿದೆ (ಪ್ರ.ವಾ., ಜ. 3). ಈ ತೂಗು ಸೌರ ಬೇಲಿಯು ತಕ್ಷಣದ ಪರಿಹಾರ ಅಷ್ಟೇ. ಈ ಸಮಸ್ಯೆಗೆ ದೀರ್ಘಾವಧಿ ಪರಿಹಾರಗಳು ಬೇಕಾಗಿವೆ.

ಅಭಿವೃದ್ಧಿಯ ಹೆಸರಿನಲ್ಲಿ ನೆಲ, ಜಲ, ಆಕಾಶ ಎಲ್ಲವನ್ನೂ ಆಕ್ರಮಿಸುತ್ತಿರುವ ಮಾನವನ ದುರಾಸೆಗೆ ಮುಗ್ಧ ಕಾಡುಪ್ರಾಣಿಗಳು ಬಲಿಯಾಗುತ್ತಿವೆ. ಮನುಷ್ಯ ತನ್ನ ಅತಿ ಆಸೆಯನ್ನು ಈಡೇರಿಸಿಕೊಳ್ಳಲು ಇತರ ಪ್ರಾಣಿಗಳ ಆವಾಸ ಸ್ಥಾನವನ್ನು ಆಕ್ರಮಿಸಿ, ಅವುಗಳನ್ನು ಸೀಮಿತ ಪರಿಧಿಯೊಳಗೆ ಇರಿಸಲು ಬೇಲಿ ನಿರ್ಮಿಸಿದ್ದಾನೆ. ವಾಸ್ತವದಲ್ಲಿ ಮಾನವನೇ ದುಷ್ಟ ಪ್ರಾಣಿ.

ನಾವೇ ಸೃಷ್ಟಿಸಿದ ಹಲವಾರು ಸಮಸ್ಯೆಗಳಿಂದಾಗಿ ಆನೆ ಹಾಗೂ ಇತರ ಅನೇಕ ಕಾಡುಪ್ರಾಣಿಗಳು ಸಾಯುತ್ತಿವೆ. ಹಾಗೆ ನೋಡಿದರೆ ಕಾಡು ಪ್ರಾಣಿಗಳು ಜನರಿಗೆ ತೊಂದರೆ ಕೊಡುತ್ತಿಲ್ಲ. ಬದಲಾಗಿ ನಾವೇ ಅವುಗಳಿಗೆ ತೊಂದರೆ ನೀಡುತ್ತಿದ್ದೇವೆ. ಇನ್ನಾದರೂ ನಮ್ಮ ದುರಾಸೆಗಳಿಗೆ ಬೇಲಿ ಹಾಕಿಕೊಳ್ಳೋಣ. ಪ್ರಾಣಿಗಳಿಗೆ ಸ್ವಾತಂತ್ಯ್ಯವನ್ನು ನೀಡೋಣ.

ADVERTISEMENT

ದರ್ಶನ್ ಕೆ.ಒ., ದೇವಿಕೆರೆ ಹೊಸೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.