ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀಸಾಮಾನ್ಯರಿಗೆ ಅನುಕೂಲಕರವಾದ ವಿಧವಾ ಮತ್ತು ಅಂಗವಿಕಲರ ಮಾಸಾಶನದ ಮೊತ್ತವನ್ನು ಹೆಚ್ಚಿಸಿರುವುದು ಶ್ಲಾಘನೀಯ. ಆದರೆ ಈ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು ಪಡುವ ಯಾತನೆಯ ನಿಯಂತ್ರಣಕ್ಕೂ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಇದಕ್ಕಾಗಿ ಅವರು ಕನಿಷ್ಠ 4-5 ಸಾವಿರ ರೂಪಾಯಿ ಖರ್ಚು ಮಾಡಬೇಕಾದ ಪರಿಸ್ಥಿತಿ ಇದೆ.
ಜೀವನ ನಿರ್ವಹಣೆಯೇ ಕಷ್ಟವಾಗಿರುವ ಇಂತಹ ಸಂದರ್ಭದಲ್ಲಿ ಅರ್ಹರು ಈ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಜೀವನೋಪಾಯಕ್ಕಾಗಿ ಸರ್ಕಾರದ ಸೌಲಭ್ಯಗಳನ್ನೇ ಅವಲಂಬಿಸಿರುವ ಇಂತಹವರಿಂದಲೂ ವಸೂಲಾತಿ ನಿರೀಕ್ಷಿಸುವವರಿಗೆ ಅಗತ್ಯವಾಗಿ ಕಡಿವಾಣ ಹಾಕಬೇಕಾಗಿದೆ.
- ತಿಮ್ಮೇಶ ಮುಸ್ಟೂರು,ಜಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.