ಕೆಲವು ದಿನಗಳಿಂದ ಹಳ್ಳಿಗಳಲ್ಲಿ ಮಕ್ಕಳ ಕಳ್ಳತನದ ವದಂತಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪಹರಣಕ್ಕೆ ಸಂಬಂಧಿಸಿದ ವಿಡಿಯೊಗಳು ಮತ್ತು ಆಡಿಯೊ ಕ್ಲಿಪ್ಗಳು ಗಾಳಿಸುದ್ದಿಗಳಿಗೆ ರೆಕ್ಕೆ ಮೂಡುವಂತೆ ಮಾಡಿವೆ.
ಮಕ್ಕಳು ಈ ಬಗೆಯ ದಂಧೆಗೆ ಬಲಿಯಾಗುವುದನ್ನು ತಪ್ಪಿಸಲು ಪೋಷಕರು ತಮ್ಮ ಮಗುವಿನಲ್ಲಿ ಅಪಾಯದ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಜನಸಾಮಾನ್ಯರಿಗೆ ಕಾನೂನಾತ್ಮಕ ಸಾಮಾಜಿಕ ಜವಾಬ್ದಾರಿಗಳ ಕುರಿತು ಜಾಗೃತಿಯನ್ನೂ ಮೂಡಿಸಬೇಕಾಗಿದೆ. ಸಂಘಟಿತ ಪ್ರಯತ್ನಗಳಿಂದ ಮಾತ್ರ ಅಪಹರಣದ ಅಪಾಯಗಳನ್ನು ನಾವು ಕೊನೆಗಾಣಿಸಲು ಸಾಧ್ಯ.
⇒ಪ್ರವೀಣ ನಾಗಪ್ಪ ಯಲವಿಗಿ,ಹಾವೇರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.