ಸಾಮಾಜಿಕ ಭದ್ರತಾ ಯೋಜನೆಗಳಡಿ ಸುಮಾರು ಮೂರೂವರೆ ಲಕ್ಷದಷ್ಟು ಬೋಗಸ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅಕ್ರಮವಾಗಿ ಪಡೆಯುತ್ತಿದ್ದ ಪಿಂಚಣಿ ಸೌಲಭ್ಯ ರದ್ದು ಮಾಡಲಾಗಿದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ. ಪಿಂಚಣಿ ಸೌಲಭ್ಯ ರದ್ದು ಮಾಡಿದರಷ್ಟೇ ಸಾಲದು, ಯೋಜನೆಯನ್ನು ದುರುಪಯೋಗ ಮಾಡಿಕೊಂಡವರು ಹಾಗೂ ಅದಕ್ಕೆ ಸಹಕರಿಸಿದ ಕಂದಾಯ ಇಲಾಖೆಯ ಸಿಬ್ಬಂದಿ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಮೂಲಕ, ಮುಂದೆ ಯಾವುದೇ ಸರ್ಕಾರಿ ಯೋಜನೆಗಳಲ್ಲಿ ಅಕ್ರಮ ನಡೆಯದಂತೆ ಎಚ್ಚರಿಕೆಯ ಸಂದೇಶ ರವಾನೆಯಾಗಬೇಕು.
- ಎ.ಜೆ.ಜಾವೀದ್,ಹಾಸನ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.