ಭೂಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವರು ಹೇಳಿದ್ದಾರೆ. ತಿದ್ದುಪಡಿಯ ಅಗತ್ಯವೂ ಇದೆ. ಆದರೆ ಮಸೂದೆಯು ವಿಧಾನಮಂಡಲದಲ್ಲಿ ವಿಸ್ತೃತವಾಗಿ ಚರ್ಚೆಗೆ ಒಳಗಾಗಿದ್ದರೆ ಅದರ ಸಾಧಕ–ಬಾಧಕಗಳು ಬೆಳಕು ಕಾಣುತ್ತಿದ್ದವು. ಸುಗ್ರೀವಾಜ್ಞೆಯು ತುರ್ತು ಸಂದರ್ಭಗಳಿಗಷ್ಟೇ ಸೀಮಿತ ಆಗಿರಬೇಕು.
ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡಿಸಿಕೊಳ್ಳಲು ಅರ್ಜಿ ನೀಡಿದ ಏಳು ದಿನಗಳಲ್ಲಿ ಅದನ್ನು ಇತ್ಯರ್ಥಗೊಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಉದ್ದೇಶ ಒಳ್ಳೆಯದು. ಅದನ್ನು ಸಾಕಾರಗೊಳಿಸುವ ಇಚ್ಛಾಶಕ್ತಿ ಸರ್ಕಾರಕ್ಕೆ ಇರಬೇಕು. ಇಲ್ಲದೇ ಹೋದರೆ ಬರೀ ಆದರ್ಶದ ಒಣಮಾತಾಗಿ ಮಾತ್ರ ಉಳಿಯುತ್ತದೆ.
⇒ನಾಗರಾಜು ಎನ್.ಎಂ.,ದಾವಣಗೆರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.