ಕೊರೊನಾ ಎರಡನೆಯ ಅಲೆಗೆ ಈಗಾಗಲೇ ಸಾವಿರಾರು ಮಂದಿಯನ್ನು ಕಳೆದುಕೊಂಡಿದ್ದೇವೆ. ಇಂತಹ ಸಂದರ್ಭದಲ್ಲಿ ಜನರಿಗೆ ಧೈರ್ಯ ತುಂಬುವ, ಅವರಲ್ಲಿ ಸೂಕ್ತ ಜಾಗೃತಿ ಮೂಡಿಸುವ, ಲಸಿಕೆ ನೀಡಿಕೆ ಕಾರ್ಯ ಚುರುಕುಗೊಳ್ಳುವಂತೆ ನೋಡಿಕೊಳ್ಳುವ ವ್ಯವಸ್ಥೆಯನ್ನು ಜನಪ್ರತಿನಿಧಿಗಳು ಸಮರೋಪಾದಿಯಲ್ಲಿ ಮಾಡಬೇಕಾಗಿದೆ. ಆಗಲೇ ಜನರಿಗೆ ಜನಪ್ರತಿನಿಧಿಗಳ ಮೇಲೆ ನಂಬಿಕೆ ಬರುವುದು. ಅದೇ ರೀತಿ ಕೋವಿಡ್ ಅನ್ನು ಎದುರಿಸುವ ಸಾಮರ್ಥ್ಯ ಮತ್ತು ಧೈರ್ಯ ಕೂಡ ಬರುವುದು.
ಯಾಸೀನ್ ಬಂಗೇರಕಟ್ಟೆ, ಬೆಳ್ತಂಗಡಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.