ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಘೋಷಣೆ ಮಾಡುವ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಈ ಹಿಂದೆ ಒಂದೆರಡು ರಾಜ್ಯಗಳಿಗೆ ಸೀಮಿತವಾಗಿದ್ದ ಉಚಿತ ಕೊಡುಗೆಗಳ ಭರಾಟೆಯು ಈಗ ದೇಶದಾದ್ಯಂತ ಮತದಾರರನ್ನು ಸೆಳೆಯುವ ಅಸ್ತ್ರದಂತೆ ಬಳಕೆಯಾಗುತ್ತಿರುವುದು ಕಳವಳಕಾರಿ. ಹೇಗಾದರೂ ಸರಿ ಅಧಿಕಾರಕ್ಕೆ ಏರಲೇಬೇಕು ಎಂಬ ಉಮೇದಿನೊಂದಿಗೆ ರಾಜಕೀಯ ಪಕ್ಷಗಳು ಚುನಾವಣೆ ಪೂರ್ವದಲ್ಲಿ ಮಾಡುವ ಈ ಘೋಷಣೆಗಳು ಜಾರಿಗೆ ಬಂದರೆ ಅವುಗಳ ಹೊರೆ ಬೀಳುವುದು ತೆರಿಗೆದಾರರ ಮೇಲೆಯೇ.
ರಾಜಕೀಯ ಪಕ್ಷಗಳು ಆದಾಯ ಹೆಚ್ಚಳ, ಆರ್ಥಿಕ ವೃದ್ಧಿ ಹಾಗೂ ಉದ್ಯೋಗಾವಕಾಶಗಳ ಮೂಲಕ ದುಡಿಯುವ ವರ್ಗವನ್ನು ಸೃಷ್ಟಿಸಬೇಕೇ ವಿನಾ ಉಚಿತ ಕೊಡುಗೆಗಳನ್ನು ನೀಡುವ ಮೂಲಕ ರಾಜ್ಯಗಳ ಆರ್ಥಿಕತೆಯನ್ನು ಹದಗೆಡಿಸುವುದಲ್ಲ. ಈ ಸಂಬಂಧ ತಜ್ಞರ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿರುವುದು ಪ್ರಶಂಸನೀಯ ಸಂಗತಿ.
-ಹರಳಹಳ್ಳಿ ಪುಟ್ಟರಾಜು,ಪಾಂಡವಪುರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.