ಕಾವೇರಿ ನೀರು ಬಳಕೆಯ ಹಕ್ಕು ಜನರಿಗೆ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷವು ಮೇಕೆದಾಟು ಎರಡನೇ ಹಂತದ ಪಾದಯಾತ್ರೆ ಆರಂಭಿಸಿರುವುದು ರಾಜ್ಯದ ಈಗಿನ ಪರಿಸ್ಥಿತಿಯಲ್ಲಿ ಸರಿಯಿಲ್ಲ. ಅನೇಕ ಜ್ವಲಂತ ಸಮಸ್ಯೆಗಳು ಸರ್ಕಾರದ ಮುಂದಿವೆ. ಅತ್ತ ರಷ್ಯಾ- ಉಕ್ರೇನ್ ಯುದ್ಧದಿಂದಾಗಿ ರಾಜ್ಯದ ನೂರಾರು ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಇತ್ತ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಭೀಕರ ಹತ್ಯೆ, ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗಲಾಟೆ... ಈ ಎಲ್ಲಾ ಅವಾಂತರಗಳನ್ನು ನಿಭಾಯಿಸುವ ಹೊಣೆ ಸರ್ಕಾರದ ಮೇಲಿದೆ. ವಿರೋಧ ಪಕ್ಷಗಳ ಹೊಣೆಗಾರಿಕೆಯೂ ಹೆಚ್ಚಿಗೇ ಇದೆ.
ಕೆ.ಎಸ್.ಕುಮಾರಸ್ವಾಮಿ,ತುಮಕೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.