ಈರುಳ್ಳಿಗೆ ಸರಿಯಾದ ಬೆಲೆ ಸಿಗದಿದ್ದರಿಂದ ಅನುಭವಿಸಿದ ಕಷ್ಟ ಹೇಳಿಕೊಳ್ಳುವುದರ ಜೊತೆಗೆ ಸರ್ಕಾರಕ್ಕೆ ಪ್ರಶ್ನೆ ಹಾಕಿ ವಿಡಿಯೊ ಹರಿಬಿಟ್ಟ ವಸಂತಕುಮಾರಿ ಅವರಿಗೆ ಸ್ವತಃ ಮುಖ್ಯಮಂತ್ರಿ ಅವರೇ ಸ್ಪಂದಿಸಿರುವುದು ಸಂತಸದ ವಿಷಯ. ಆದರೆ ಈ ಸಮಸ್ಯೆ ಬರೀ ಒಬ್ಬರದ್ದಲ್ಲ. ಬಹುಪಾಲು ರೈತರದು ಇದೇ ಪರಿಸ್ಥಿತಿ.
ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ದೊರೆಯುತ್ತಿಲ್ಲ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಸರ್ಕಾರ ಎಲ್ಲ ಜಿಲ್ಲೆಗಳನ್ನೂ ಗಣನೆಗೆ ತೆಗೆದುಕೊಂಡು ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಮುಖಾಂತರ ವಿವರ ಪಡೆದು ರೈತರ ಸಮಸ್ಯೆ ಬಗೆಹರಿಸಬೇಕು. ಎಲ್ಲರೂ ವಿಡಿಯೊ ಮಾಡಿ ಸಮಸ್ಯೆ ಹೇಳಿಕೊಳ್ಳುವುದಿಲ್ಲ ಅಲ್ಲವೇ? ಸರ್ಕಾರವೇ ನಿಗದಿತ ಬೆಲೆ ನೀಡಿ ಖರೀದಿಸಿದರೆ ಉತ್ತಮ.
-ಚೆಲುವರಾಜು ಕೆ., ಧನಗೆರೆ, ಕೊಳ್ಳೇಗಾಲ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.