ಗುತ್ತಿಗೆ ವೈದ್ಯರ ಸೇವೆಯನ್ನು ಸರ್ಕಾರ ಕಾಯಂ ಮಾಡಲು ಮುಂದಾಗಿರುವುದು ಸ್ವಾಗತಾರ್ಹ. ಅದೇ ರೀತಿ ಆರೋಗ್ಯ ಇಲಾಖೆಯಲ್ಲಿ ಲ್ಯಾಬ್ ಟೆಕ್ನೀಷಿಯನ್ಗಳು, ಶುಶ್ರೂಷಕಿಯರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಾವಿರಾರು ಗುತ್ತಿಗೆ ನೌಕರರಿದ್ದಾರೆ. ಇವರಿಂದ ಕೊರೊನಾ ತಪಾಸಣೆ ಮಾಡಿಸಲಾಗುತ್ತಿದೆ. ಪ್ರಾಥಮಿಕ, ಸಮುದಾಯ, ನಗರ ಜಿಲ್ಲಾ ಆಸ್ಪತ್ರೆಗಳಲ್ಲಿ ಕಾಯಂ ನೌಕರರಿಲ್ಲ, ಎಲ್ಲೆಡೆಯೂ ಗುತ್ತಿಗೆ ನೌಕರರೇ ಇದ್ದಾರೆ. ಸರ್ಕಾರ ಇವರ ಬಗ್ಗೆಯೂ ಕಾಳಜಿ ತೋರಿ ಸೇವೆಯನ್ನು ಕಾಯಂಗೊಳಿಸಬೇಕು.
- ವೀರೇಶ ಬಿ.,ಹಾವೇರಿ, ಶರಣಪ್ಪ ಕೆ.,ಗದಗ, ಬಸವರಾಜ ಡಿ.,ಕುಂದಗೋಳ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.