ADVERTISEMENT

ವಾಚಕರ ವಾಣಿ | ತಪ್ಪುಗಳ ಸರಮಾಲೆ ತಂದ ಗೊಂದಲ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 19:31 IST
Last Updated 20 ಮಾರ್ಚ್ 2022, 19:31 IST

ಯಾವುದೇ ಮುಖ್ಯ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ಒಂದೆರಡು ತಪ್ಪುಗಳು ನುಸುಳಬಹುದು. ಆದರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯ ಕನ್ನಡ ವಿಷಯಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಪರೀಕ್ಷಾ ಪ್ರಶ್ನೆಪತ್ರಿಕೆಯಲ್ಲಿ ಹಲವಾರು ದೋಷಗಳು ಕಂಡುಬಂದಿವೆ. ಇಂತಹ ತಪ್ಪುಗಳ ಸರಮಾಲೆಯನ್ನು ಯಾರು ಮಾಡಿದರೋ ಅದನ್ನು ಪ್ರಾಧಿಕಾರ ಹೇಗೆ ಒಪ್ಪಿತೋ ಎಲ್ಲವೂ ಗೊಂದಲಮಯ. ಪ್ರಶ್ನೆಪತ್ರಿಕೆ ಸಿದ್ಧಪಡಿಸಿದವರ ಕನ್ನಡ ಜ್ಞಾನದ ಮನಃಸ್ಥಿತಿ ಹೇಗಿತ್ತೋ ಕಾಣಲಾಗದು. ಇಂತಹ ಎಡವಟ್ಟುಗಳಿಂದ, ಇತ್ತೀಚಿನ ದಿನಗಳಲ್ಲಿ ಕೆಇಎ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದೆ.

-ದೇವರಹಳ್ಳಿ ಲೋಕೇಶ್, ಪಾಂಡವಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT