ಬ್ರಿಟಿಷರ ಕಾಲದಲ್ಲಿ ನಡೆದ ಕೊಡಗಿನ ಬಂಡಾಯದ ಕುರಿತು ಅರವಿಂದ ಚೊಕ್ಕಾಡಿ ಅವರು ಬರೆದಿರುವ ಲೇಖನ (ಪ್ರ.ವಾ., ಅ. 30) ಈ ಭಾಗದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ ಗುಣಾತ್ಮಕ ಅಂಶಗಳನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದೆ. ರಾಜ್ಯೋತ್ಸವದ ಸಂದರ್ಭದಲ್ಲಿ ಇಂತಹ ಮಾಹಿತಿ ನೀಡಿರುವುದು ಔಚಿತ್ಯಪೂರ್ಣವಾಗಿದೆ. ಈ ಹೋರಾಟವು ಗಾಂಧೀಜಿ ನೇತೃತ್ವದ ಹೋರಾಟಕ್ಕೆ ಮಾದರಿಯಾಗಿದ್ದ ವಿಷಯ ತಿಳಿದು ಕನ್ನಡಿಗರ ಶೌರ್ಯ, ಸಾಹಸ ಎಷ್ಟಿತ್ತು ಎನ್ನುವುದು ನಮಗೆ ಅರಿವಾಗುತ್ತದೆ.
ಡಾ. ಸಂಜೀವಕುಮಾರ ಅತಿವಾಳೆ, ಬೀದರ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.