ADVERTISEMENT

ಮಹಿಷ ದಸರಾಕ್ಕೆ ತಡೆ: ರಾಜಕೀಯ ಕುಲಕ್ಕೆ ಕಳಂಕ ತರುವ ನಡೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2019, 20:00 IST
Last Updated 30 ಸೆಪ್ಟೆಂಬರ್ 2019, 20:00 IST

ಮೈಸೂರಿನಲ್ಲಿ ಎಂದಿನಂತೆ ಆಚರಿಸಲು ಉದ್ದೇಶಿಸಿದ್ದ ಮಹಿಷ ದಸರಾವನ್ನು ಸಂಸದ ಪ್ರತಾಪ್ ಸಿಂಹ ಅವರು ತಡೆದದ್ದು ಸರಿಯಲ್ಲ. ವೇದಿಕೆ ತೆರವುಗೊಳಿಸುವಂತೆ ಸಾರ್ವಜನಿಕರ ಸಮ್ಮುಖದಲ್ಲೇ ಅವರು ಪೊಲೀಸ್‌ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ. ಯಾರೇ ಆಗಿರಲಿ, ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಗೆ ಗೌರವ ಕೊಡುವುದು ಮನುಷ್ಯ ಧರ್ಮ. ಈ ರೀತಿಯ ಗೂಂಡಾ ವರ್ತನೆಯು ರಾಜಕೀಯ ಕುಲಕ್ಕೆ ಕಳಂಕ ತರುತ್ತದೆ. ಸಂಸದರು ಪೊಲೀಸ್‌ ಅಧಿಕಾರಿಗಳ ಕ್ಷಮೆ ಕೇಳಿ ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬೇಕು.

–ಆಕಾಶ್ ಆರ್‌.ಎಸ್‌.,ಶಿವಮೊಗ್ಗ

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT