ADVERTISEMENT

ಸಂಸದರು ಖುದ್ದು ಭೇಟಿ ನೀಡಲಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2019, 16:22 IST
Last Updated 22 ಸೆಪ್ಟೆಂಬರ್ 2019, 16:22 IST

‘ನೆರೆ ಪರಿಹಾರಕ್ಕಾಗಿ ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ, ರಾಜ್ಯ ಸರ್ಕಾರವೇ ಆರ್ಥಿಕವಾಗಿ ಸದೃಢವಾಗಿದೆ’ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಅವರು ಒಂದು ದಿನ ಬಿಡುವು ಮಾಡಿಕೊಂಡು ನೆರೆ ಸಂತ್ರಸ್ತ ಊರುಗಳಿಗೆ ಭೇಟಿ ನೀಡಿ, ಅಲ್ಲಿ ಎಷ್ಟೊಂದು ನಷ್ಟ ಸಂಭವಿಸಿದೆ ಎಂಬುದನ್ನು ಖುದ್ದು ನೋಡಲಿ. ಆಗ ಅವರಿಗೆ ರಾಜ್ಯ ಸರ್ಕಾರ ಎಷ್ಟು ನಷ್ಟವನ್ನು ಭರಿಸಿ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಇನ್ನೂ ಎಷ್ಟು ಹಣದ ಅವಶ್ಯಕತೆ ಇದೆ ಎಂಬುದು ತಿಳಿಯುತ್ತದೆ.

ರಾಜ್ಯ ಸರ್ಕಾರ ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿದ್ದರೆ ಸಮರೋಪಾದಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡು ನೊಂದ ಜೀವಗಳಿಗೆ ಆಸರೆಯಾಗಬೇಕಿತ್ತು. ಅದನ್ನು ಬಿಟ್ಟು ಇಷ್ಟು ದಿನ ಏಕೆ ಕೇಂದ್ರದ ಕಡೆಗೆ ಮುಖ ಮಾಡಿ ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿತ್ತು?

ADVERTISEMENT

ರಾಜು ಬಿ. ಲಕ್ಕಂಪುರ, ಜಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.