ADVERTISEMENT

ವಾಚಕರ ವಾಣಿ: ಪಕ್ಷಾಂತರಿಗಳಿಗೆ ಎಚ್ಚರಿಕೆಯ ಗಂಟೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2022, 19:31 IST
Last Updated 7 ನವೆಂಬರ್ 2022, 19:31 IST

ತೆಲಂಗಾಣದ ಮುನುಗೋಡು ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ, ಈ ಹಿಂದೆ ಕಾಂಗ್ರೆಸ್‌ನಿಂದ ಗೆದ್ದಿದ್ದರೂ ಬಿಜೆಪಿ ಸೇರಿ ಕಣಕ್ಕಿಳಿದಿದ್ದ ಅಭ್ಯರ್ಥಿಯನ್ನು ಮತದಾರರು ಭಾರಿ ಅಂತರದಿಂದ ಸೋಲಿಸಿರುವುದು ಪಕ್ಷಾಂತರ ಮಾಡುವ ರಾಜಕಾರಣಿಗಳಿಗೆ ಎಚ್ಚರಿಕೆಯ ಗಂಟೆಯಂತಿದೆ. ಮತದಾರರು ಜಾಗೃತರಾಗುತ್ತಿರುವ ಸೂಚನೆಯೂ ಇದಾಗಿದೆ.

ನಿಜಕ್ಕೂ ಇಲ್ಲಿ ಪಾಠ ಕಲಿಯಬೇಕಿರುವುದು ಅಧಿಕಾರದ ಆಸೆಗೆ ಬಿದ್ದು ಮತ ದಾರರಿಗೆ ದ್ರೋಹ ಬಗೆಯುವ ರಾಜಕಾರಣಿಗಳು. ಆದ್ದರಿಂದ ಈ ಪಾಠ ಇಡೀ ದೇಶಕ್ಕೆ ಮಾದರಿಯಾಗಿದೆ. ನಿಧಾನವಾಗಿಯಾದರೂ ದೇಶದ ಮತದಾರರು ಪಕ್ಷಾಂತರಿಗಳಿಗೆ ತಕ್ಕಪಾಠ ಕಲಿಸಿ, ಪ್ರಜಾಪ್ರಭುತ್ವವನ್ನು ಸದೃಢಗೊಳಿಸುತ್ತಿರುವುದು ಶುಭ ಸೂಚನೆಯಾಗಿದೆ.

–ಹುರುಕಡ್ಲಿ ಶಿವಕುಮಾರ, ಬಾಚಿಗೊಂಡನಹಳ್ಳಿ, ಹಗರಿಬೊಮ್ಮನಹಳ್ಳಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.