ಕೋವಿಡ್ನಿಂದ ಉಂಟಾಗಿರುವ ಸೂಕ್ಷ್ಮ ಸ್ಥಿತಿಯಿಂದಾಗಿ ಮೈಸೂರಿನಲ್ಲಿ ಜಂಬೂಸವಾರಿಯನ್ನು ಸಾರ್ವಜನಿಕವಾಗಿ ಆಚರಿಸುವುದು ಸರಿಯಲ್ಲ. ಭೌತಿಕ ಅಂತರ ಕಾಪಾಡಿಕೊಳ್ಳದಿರುವುದು, ಮಾಸ್ಕ್ ಧರಿಸದೇ ಇರುವುದು ಈಗೀಗ ಸಾಮಾನ್ಯವಾಗಿ ಬಿಟ್ಟಿದೆ. ಕೊರೊನಾ ಸೋಂಕಿನ ಬಗ್ಗೆ ಮೊದಲಿದ್ದ ಆತಂಕ ಈಗ ಇಲ್ಲವಾಗಿದೆ. ಜಂಬೂಸವಾರಿ ನೋಡಲು ಮೈಸೂರಿನಲ್ಲಿ ಜನ ದಟ್ಟೈಸಿದರೆ ಸೋಂಕು ಹರಡುವ ಸಾಧ್ಯತೆ ಇಲ್ಲದಿಲ್ಲ. ಆದ್ದರಿಂದ ಜಂಬೂ ಸವಾರಿಗಿಂತ ಸಾರ್ವಜನಿಕರ ಆರೋಗ್ಯಕ್ಕೆ ಮಹತ್ವ ನೀಡಬೇಕಾಗಿದೆ. ಬೇಕಾದರೆ
ಸೀಮಿತವಾಗಿ ಅರಮನೆ ಆವರಣದಲ್ಲಿ ಸರಳವಾಗಿ ಆಚರಿಸಿಕೊಂಡು ಪರಂಪರೆಯನ್ನು ಮುಂದುವರಿಸುವುದು ಒಳ್ಳೆಯದು.
–ಸಿ.ಸಿದ್ದರಾಜು ಆಲಕೆರೆ,ಮಂಡ್ಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.