ಅಪರೂಪದ ತಳಿಯಾಗಿದ್ದು ಭೌಗೋಳಿಕ ಮಾನ್ಯತೆ ಪಡೆದಿದ್ದರೂ ಬೆಳೆ ಪ್ರಮಾಣ ಕುಂಠಿತವಾಗುತ್ತಿರುವ ಜನಪ್ರಿಯ ‘ನಂಜನಗೂಡು ರಸಬಾಳೆ’ಯನ್ನು ಬೆಳೆಯಲು ರೈತರನ್ನು ಉತ್ತೇಜಿಸುವಂತೆ ತೋಟಗಾರಿಕಾ ಅಧಿಕಾರಿಗಳಿಗೆ ಮೈಸೂರಿನ ಜಿಲ್ಲಾಧಿಕಾರಿ ಸೂಚನೆ ಕೊಟ್ಟಿದ್ದಾರೆ. ನಂಜನಗೂಡು ತಾಲ್ಲೂಕಿನ ಫಲವತ್ತಾದ ಕಪ್ಪು ಮಣ್ಣಿನಿಂದ ಕೂಡಿರುವ ದೇವರಸನಹಳ್ಳಿ ಎಂಬ ಗ್ರಾಮದಲ್ಲಿ ಮೊದಲು ಈ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿತ್ತು. ಇದೀಗ ಈ ವಿಶೇಷ ರಸಬಾಳೆ ಬೆಳೆಯುವ ಪ್ರದೇಶದ ಪ್ರಮಾಣ ತೀರಾ ಕಡಿಮೆಯಾಗಲು ಏನು ಕಾರಣ, ಈ ಬೆಳೆಯನ್ನು ಹೆಚ್ಚಿನ ಪ್ರದೇಶಕ್ಕೆ ವಿಸ್ತರಿಸಲು ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಗಂಭೀರವಾದ ಚಿಂತನೆ ನಡೆಯಬೇಕಾಗಿದೆ.
ಸರ್ಕಾರ ಆಧುನಿಕ ತಂತ್ರಜ್ಞಾನ ಬಳಸಿಕೊಂಡು, ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಈ ತಳಿ ಉಳಿಯುವಂತೆ ಮಾಡಬಹುದು. ರಸಬಾಳೆಯ ವೈಶಿಷ್ಟ್ಯದ ಬಗ್ಗೆ ಹೆಚ್ಚಿನ ತಿಳಿವಳಿಕೆ ಇಲ್ಲದಿದ್ದರೆ ಅದು ಅಳಿದುಹೋಗುವ ಸಾಧ್ಯತೆಯೇ ಹೆಚ್ಚು. ಸ್ವಾದಿಷ್ಟ ಮತ್ತು ಪೋಷಕಾಂಶಯುಕ್ತವಾದ ಈ ಹಣ್ಣನ್ನು ಸಂರಕ್ಷಿಸಬೇಕಾದ ಅಗತ್ಯ ಇದೆ. ಈ ದಿಸೆಯಲ್ಲಿ ಸ್ಥಳೀಯ ಆಡಳಿತ ಹೆಚ್ಚು ಮುತುವರ್ಜಿ ವಹಿಸಲಿ.
–ಅನಿಲ್ ಕುಮಾರ್, ನಂಜನಗೂಡು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.