ADVERTISEMENT

ಶೋಭರಾಜ್‌ ನೆನಪಿಸಿದ ಮಾಧ್ಯಮ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2021, 19:30 IST
Last Updated 24 ಡಿಸೆಂಬರ್ 2021, 19:30 IST

ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಅವರಿಗೆ 77 ವರ್ಷ ಆಗಿರುವುದರಿಂದ ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಮೂರು ದಿನಗಳಲ್ಲಿ ಉತ್ತರಿಸುವಂತೆ ನೇಪಾಳದ ಸುಪ್ರೀಂ ಕೋರ್ಟ್, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವುದು ವರದಿಯಾಗಿದೆ (ಪ್ರ.ವಾ., ಡಿ. 24).

ಜಗತ್ತು ಶೋಭರಾಜ್ ಕುರಿತಂತೆ ಬಹುತೇಕ ಮರೆತೇಹೋಗಿತ್ತು. ಇಂದಿನವರಿಗಂತೂ ಆತನ ಹೆಸರೇ ಗೊತ್ತಿಲ್ಲದೇ ಇರಬಹುದು. ಹಲವಾರು ವರ್ಷಗಳಿಂದ ಆತನ ಸುದ್ದಿಯೇ ಇರಲಿಲ್ಲ. ಅಂತಹ ವ್ಯಕ್ತಿಯ ಕುರಿತ ಸುದ್ದಿಯನ್ನು ಪತ್ರಿಕೆ ಪ್ರಕಟಿಸಿದೆ. ಜಗತ್ತಿನ ಮೂಲೆಮೂಲೆಯಲ್ಲಿ ನಡೆಯುವ ವಿಚಾರಗಳೆಡೆ ಮಾಧ್ಯಮಗಳು ಕಣ್ಣಿಟ್ಟು, ಅವುಗಳನ್ನು ಜನರಿಗೆ ತಲುಪಿಸಲು ಶ್ರಮಿಸುತ್ತವೆ ಎಂಬುದಕ್ಕೆ ಇದೇ ನಿದರ್ಶನ.

–ಪತ್ತಂಗಿ ಎಸ್. ಮುರಳಿ, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.