ರಾಜ್ಯ ಸರ್ಕಾರವು ಮಂಡ್ಯ ಮತ್ತು ರಾಯಚೂರಿನಲ್ಲಿ ತಲಾ ಒಂದು ಹೊಸ ವಿಶ್ವವಿದ್ಯಾಲಯ ಸ್ಥಾಪಿಸಲು ಮುಂದಾಗಿರುವ ಕ್ರಮ ಸರಿಯಲ್ಲ. ಜಿಲ್ಲೆಗೊಂದು ವಿಶ್ವವಿದ್ಯಾಲಯ ಸ್ಥಾಪಿಸುವುದರಿಂದ ಸಾಧಿಸುವುದೇನೂ ಇಲ್ಲ. ಬದಲಿಗೆ, ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತದೆ ಮತ್ತು ಆಡಳಿತ ವೆಚ್ಚವು ಅಧಿಕವಾಗುತ್ತದೆ.
ಇದರ ಬದಲು, ಈಗಿರುವ ವಿಶ್ವವಿದ್ಯಾಲಯಗಳಿಗೆ ಅನುದಾನ ಮತ್ತು ಮಾನವ ಸಂಪನ್ಮೂಲವನ್ನು ಸೂಕ್ತ ರೀತಿಯಲ್ಲಿ ಒದಗಿಸಿ, ನೇಮಕಾತಿಗಳಲ್ಲಿ ಪಾರದರ್ಶಕತೆ ತರಬೇಕು. ಆ ಮೂಲಕ ವಿಶ್ವವಿದ್ಯಾಲಯಗಳ ಗುಣಮಟ್ಟ ಸುಧಾರಿಸುವ ಬದ್ಧತೆ ತೋರಬೇಕು.
–ಅಜ್ಜಹಳ್ಳಿ ಅರುಣ್ ಗೌಡ,ಮದ್ದೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.