ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವ್ಯಾಪ್ತಿಯ ಬಿ.ಇಡಿ 1ನೇ ಮತ್ತು 3ನೇ ಸೆಮಿಸ್ಟರ್ ಪರೀಕ್ಷೆಗಳು ಮುಗಿದು ಮೂರು ತಿಂಗಳು ಕಳೆದಿವೆ. ಆದರೂ ಫಲಿತಾಂಶ ಪ್ರಕಟವಾಗಿಲ್ಲ. ಮೌಲ್ಯಮಾಪನ ಮಾಡಲು ಮೌಲ್ಯಮಾಪಕರೇ ಇಲ್ಲವಂತೆ! ಹಾಗಾದರೆ ವಿಶ್ವವಿದ್ಯಾಲಯ ಯಾಕೆ ಅಸ್ತಿತ್ವದಲ್ಲಿದೆ? ದಯವಿಟ್ಟು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡದೆ, ಶೀಘ್ರದಲ್ಲಿ ಫಲಿತಾಂಶ ಪ್ರಕಟಿಸಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.