ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ಇತ್ತೀಚೆಗೆ ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡರ ಮನೆಗೆ ಹೋಗಿ ಊಟ ಮಾಡಿದ್ದು ಮಾಧ್ಯಮದಲ್ಲಿ ಸುದ್ದಿಯಾಗಿದೆ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಗಳ ಮದುವೆಯು ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರ ಮೊಮ್ಮಗನ ಜೊತೆ ನಿಶ್ಚಯವಾಗಿದ್ದು, ಬಿಜೆಪಿ ಸಂಸದ ಪಿ.ಸಿ.ಮೋಹನ್ ಅವರ ಮಗಳ ನಿಶ್ಚಿತಾರ್ಥವು ಕಾಂಗ್ರೆಸ್ ಮುಖಂಡ ಆರ್.ವಿ.ದೇವರಾಜ್ ಅವರ ಮಗನ ಜೊತೆ ಆಗಿರುವುದು ಎಲ್ಲವೂ ಸುದ್ದಿಯಾಗಿವೆ.
ಯಾವುದೇ ರಾಜಕಾರಣಿ ಖಾಸಗಿ ಬದುಕಿನಿಂದ ಹೊರತಾಗಿ ಇರುವುದಿಲ್ಲ. ರಾಜಕಾರಣ, ರಾಜಕೀಯ ಭಿನ್ನಾಭಿಪ್ರಾಯಗಳ ಮಧ್ಯೆಯೂ ರಾಜಕಾರಣಿಗಳ ನಡುವಿನ ವೈಯಕ್ತಿಕ ಸಂಬಂಧ ಚೆನ್ನಾಗಿರಬೇಕು. ಇದು ಹಿಂದಿನಿಂದ ಪಾಲಿಸಿಕೊಂಡು ಬಂದಿರುವ ಪರಿಪಾಟ. ಇಂತಹ ಸಂಗತಿಗಳು ಸಾದಾಸೀದಾ ವರದಿಗಳಾಗಿ ಪ್ರಕಟವಾದರೆ ತಪ್ಪೇನಿಲ್ಲ. ಆದರೆ ಮಾಧ್ಯಮಗಳು ಇತ್ತೀಚೆಗೆ ರಾಜಕೀಯ ಮುಖಂಡರ ಖಾಸಗಿ ಬದುಕನ್ನು ವೈಭವೀಕರಿಸುತ್ತಿವೆ. ಅತಿರಂಜಿತ ವರದಿಗಳ ಮೂಲಕ ಇಂತಹ ಸಂಬಂಧಗಳನ್ನೇ ಪ್ರಶ್ನೆ ಮಾಡುತ್ತಿವೆ. ಇಂತಹ ನಡೆ ಎಷ್ಟು ಸರಿ? ಇದು ನಮ್ಮ ಪರಂಪರೆ ಮತ್ತು ಸಾಂಸ್ಕೃತಿಕ ಸಂಬಂಧಗಳ ಮೇಲೆ ಕೆಟ್ಟ ಪರಿಣಾಮ ಬೀರುವುದಿಲ್ಲವೇ?
-ಟಿ.ಪ್ರಭಾಕರ್,ಬೆಂಗಳೂರು
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.